ದಲಿತರ ಸಮಸ್ಯೆಗೆ ಸ್ಪಂದಿಸದ ಅಧಿಕಾರಿ: ಗ್ರಾ.ಪಂ.ಗೆ ಬೀಗ ಜಡೆದು ಹೋರಾಟದ ಎಚ್ಚರಿಕೆ.
ದಲಿತರ ಸಮಸ್ಯೆಗೆ ಸ್ಪಂದಿಸದ ಅಧಿಕಾರಿ: ಗ್ರಾ.ಪಂ.ಗೆ ಬೀಗ ಜಡೆದು ಹೋರಾಟದ ಎಚ್ಚರಿಕೆ.
ಯಾದಗಿರಿ: ಜಿಲ್ಲೆಯ ವಡಗೇರಾ ತಾಲೂಕಿನ ಗೊಂದೇನೂರ ಗ್ರಾಮದ ದಲಿತರ ಬಡಾವಣೆಯಲ್ಲಿ ಸಾರ್ವಜನಿಕರು ತಿರುಗಾಡುವ ರಸ್ತೆಯು ಹದಗೆಟ್ಟಿದ್ದು, ಮಳೆ ಬಂದಾಗ ಗುಂಡಿ ಬಿದ್ದು ನೀರು ತುಂಬಿರುತ್ತದೆ. ವಯಸ್ಸಾದವರು ಹಾಗೂ ಚಿಕ್ಕ ಮಕ್ಕಳು ಓಡಾಡುವುದು ತುಂಬಾ ಕಷ್ಟವಾಗಿದೆ. ಅಲ್ಲದೆ ಚರಂಡಿಯ ನೀರು ಸಹ ರಸ್ತೆಯಲ್ಲಿ ಹರಿಯುತ್ತಿದ್ದು, ದುರ್ವಾಸನೆ ಬೀರುತ್ತಿದೆ. ಇದರಿಂದ ಅಲ್ಲಿನ ನಿವಾಸಿಗಳು ರೋಗಕ್ಕೆ ತುತ್ತಾಗುತ್ತಿದ್ದಾರೆ.
ಈ ಕುರಿತು ವ್ಯಾಪ್ತಿಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಪ್ರವೀಣ್ ಕುಮಾರ್ ಅವರಿಗೆ ಹಲವಾರು ಬಾರಿ ಮನವಿ ಮಾಡಿದ್ದು, ಅವರು ನಿರ್ಲಕ್ಶ್ಯ ತೋರಿಸುತ್ತಿದ್ದಾರೆ. ಬಡಾವಣೆಯ ಜನರು ಫೋನ್ ಮಾಡಿದರೂ ಸಹ ಅವರು ಕರೆಗಳಿಗೆ ಸ್ಪಂದಿಸುವುದಿಲ್ಲ ಎಂದು ಬಹುಜನ ಅಂಬೇಡ್ಕರ್ ಸಂಘದ ವಿದ್ಯಾರ್ಥಿ ಒಕ್ಕೂಟದ ತಾಲೂಕು ಅಧ್ಯಕ್ಷ ಅಯ್ಯಪ್ಪ ಗೋಂದೇನೂರ ಆರೋಪಿಸಿದ್ದಾರೆ. ಇದೆ ರೀತಿಯಾಗಿ ಪಂಚಾಯತಿ ಅಧಿಕಾರಿಗಳು ನಿರ್ಲಕ್ಷ್ಯ ವಹಿಸಿದರೆ ಪಂಚಾಯಿತಿ ಕಚೇರಿಗೆ ಬೀಗಮುದ್ರೆ ಜಡಿದು ಪ್ರತಿಭಟನೆ ಮಾಡಲಾಗುತ್ತದೆ ಎಚ್ಚರಿಕೆ ನೀಡಿದ್ದಾರೆ..
Recent comments