ಮಹಾಶಕ್ತಿ ಮಹಿಳಾ ಸಬಲೀಕರಣ ಸಂಘ (ರಿ )ವತಿಯಿಂದ ವಿವಿಧ ಕ್ಷೇತದಲ್ಲಿ ಗಣನಿಯ ಸೇವೆ ಸಲ್ಲಿಸಿದ ಸಾಧಕರಿಗೆ ಸನ್ಮಾನ.
ಮಹಾಶಕ್ತಿ ಮಹಿಳಾ ಸಬಲೀಕರಣ ಸಂಘ (ರಿ )ವತಿಯಿಂದ ವಿವಿಧ ಕ್ಷೇತದಲ್ಲಿ ಗಣನಿಯ ಸೇವೆ ಸಲ್ಲಿಸಿದ ಸಾಧಕರಿಗೆ ಸನ್ಮಾನ.

ಸಿರವಾರ : ರಾಷ್ಟ್ರೀಯ ಮಹಿಳಾ ದಿನಾಚರಣೆಯ ಅಂಗವಾಗಿ ಇಂದು ಮಹಾಶಕ್ತಿ ಮಹಿಳಾ ಸಬಲೀಕರಣ ರಾಜ್ಯ ಸಂಘ (ರಿ ) ಹಮ್ಮಿಕೊಂಡಿದ್ದ ಕಾರ್ಯಕ್ರಮದ ಅಂಗವಾಗಿ ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ ಮಹಿಳಾ ಸಾಧಕರಿಗೆ ಸನ್ಮಾನಿಸಿ ಗೌರವಿಸಲಾಯಿತು.
ಕಾರ್ಯಕ್ರಮದ ಉದ್ದೇಶಿಸಿ ಮಾತನಾಡಿದ ಕರ್ನಾಟಕದ ಹಾವೇರಿಯ ಟ್ರಾನ್ಸ್ಜೆಂಡರ್ ಕಾರ್ಯಕರ್ತೆ,12 ವರ್ಷಗಳಿಗೂ ಹೆಚ್ಚು ಕಾಲ ಸಮುದಾಯದ ಹಸ್ತಕ್ಷೇಪ ಮತ್ತು ಕ್ರಿಯಾಶೀಲತೆಗೆ ಹೆಸರುವಾಸಿಯಾಗಿರುವ ವಿಶೇಷವಾಗಿ ಟ್ರಾನ್ಸ್ಜೆಂಡರ್ಗಳು ಮತ್ತು ದಲಿತರ ಧ್ವನಿಗಳನ್ನು ವರ್ಧಿಸುವುದು ಮತ್ತು ಲೈಂಗಿಕ ಮತ್ತು ಲಿಂಗ ಅಲ್ಪಸಂಖ್ಯಾತರ ಸಾಮಾಜಿಕ ಗ್ರಹಿಕೆಗಳನ್ನು ಬದಲಾಯಿಸುವತ್ತ ಗಮನಹರಿಸಿರುವ ಬಂದಿರುವ ಅಕ್ಷತಾ ಕೆ ಸಿ ಅವರು ಸಮಾಜದಲ್ಲಿ ಮಹಿಳೆಯರ ಮೇಲೆ ನಡೆಯುತ್ತಿರುವ ದೌರ್ಜನ್ಯ, ಲಿಂಗ ಭೇದಗಳ ವಿಷಯದ ಬಗ್ಗೆ ತಿಳಿಸಿ, ಬಸವಾದಿ ಶರಣರು, ಡಾ. ಬಿ. ಆರ್. ಅಂಬೇಡ್ಕರ್ ಅವರ ಚಿಂತನೆಗಳು ಈಗಿನ ಮಹಿಳೆಯರಿಗೆ ಸ್ಫೂರ್ತಿಯಾಗುವುದರೊಂದಿಗೆ, ನಮ್ಮ ಸಂವಿಧಾನ ಕೊಟ್ಟ ಮಹಿಳಾ ಸ್ವಾತಂತ್ರದ ಬಗ್ಗೆ ಮೆಚ್ಚುಗೆ ವ್ಯಕ್ತ ಪಡಿಸಿದರು.

ಇನ್ನೂ ಸಿರವಾರ ತಾಲೂಕಿನಲ್ಲಿ ಹಮ್ಮಿಕೊಂಡಿದ್ದ ಸಮಾರಂಭದ ಬಗ್ಗೆ ಮಾತನಾಡುತ್ತಾ ಇಂತಹ ಸ್ಫೂರ್ತಿದಾಯಕ ಕಾರ್ಯಕ್ರಮಗಳು ಅವಶ್ಯಕತೆ ಇದೇ ಎಂದು ಹೇಳಿದರು.
Recent comments