Skip to main content
ಕೊರೊನ ಸಂಕಷ್ಟದಲ್ಲಿ ಪ್ರಾಣ ಪಣಕ್ಕಿಟ್ಟು ದುಡಿಯುತ್ತಿರೊ ಆಶಾ ಕಾರ್ಯಕರ್ತರಿಗೆ ಆರ್ಥಿಕ ನೆರವು ನೀಡಿದ ನಿಖಿಲ್ ಕುಮಾರಸ್ವಾಮಿ

ಕೊರೊನ ಸಂಕಷ್ಟದಲ್ಲಿ ಪ್ರಾಣ ಪಣಕ್ಕಿಟ್ಟು ದುಡಿಯುತ್ತಿರೊ ಆಶಾ ಕಾರ್ಯಕರ್ತರಿಗೆ ಆರ್ಥಿಕ ನೆರವು ನೀಡಿದ ನಿಖಿಲ್ ಕುಮಾರಸ್ವಾಮಿ

ಕೊರೊನ ಸಂಕಷ್ಟದಲ್ಲಿ ಪ್ರಾಣ ಪಣಕ್ಕಿಟ್ಟು ದುಡಿಯುತ್ತಿರೊ ಆಶಾ ಕಾರ್ಯಕರ್ತರಿಗೆ ಆರ್ಥಿಕ ನೆರವು ನೀಡಿದ ನಿಖಿಲ್ ಕುಮಾರಸ್ವಾಮಿ.

H d ದೇವೇಗೌಡರು

ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿರವರು ಕೊರೋನಾದ ಲಾಕ್ಡೌನ್ ಸಂಧರ್ಭದಲ್ಲಿಯೂ ತಮ್ಮ ಜೀವ ಮತ್ತು ಕುಟುಂಬವನ್ನು ಪಣಕ್ಕಿಟ್ಟು ಕೋರನಾ ವಾರಿಯರ್ಸ್ಆಗಿ ಕಾರ್ಯ ನಿರ್ವಹಿಸುತ್ತಿರುವ ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸ್ಟಾಪ್ ನರ್ಸ್ ಗಳಿಗೆ ನಿಖಿಲ್ ಕುಮಾರ್ ಸ್ವಾಮಿ ರವರು ಆರ್ಥಿಕ ನೆರವು ನೀಡಿದರು.

ಜೊತೆಗೆ ನೆಬ್ಯುಲೈಝರ್ ಮಿಷಿನ್ ನೀಡಿದರು ಇನ್ನುಇದಲ್ಲದೆ ರಾಮನಗರ ಜಿಲ್ಲಾ ವೈದ್ಯಾಧಿಕಾರಿಗಳ ಕಚೇರಿ ಆವರಣದಲ್ಲಿ ಆರ್ಥಿಕ ನೆರವು ನೀಡಿದರು ಬಳಿಕ ಸುದ್ಧಿಗಾರರೊಂದಿಗೆ ಮಾತನಾಡಿದ ನಿಖಿಲ್ ಕುಮಾರಸ್ವಾಮಿ.

H d ದೇವೇಗೌಡರು

ರಾಜ್ಯದಲ್ಲಿ ಎರಡನೇ ಅಲೆ ತೀವ್ರವಾಗಿದೆ.. ಕಳೆದ ವರ್ಷ ಹಾಗೂ ಈ ಬಾರಿ ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು ಸೇರಿದಂತೆ ಕೊರೋನಾ ವಾರಿಯರ್ಸ್ ತಮ್ಮ ಪ್ರಾಣ ಪಣಕ್ಕಿಟ್ಟು ಲಕ್ಷಾಂತರ ಜನರ ಪ್ರಾಣ ಉಳಿಸುತ್ತಿದ್ದಾರೆ.

ಇವತ್ತು ಎಲ್ಲಾ ಕೋವಿಡ್ ವಾರಿಯರ್ಸ್ ನಿಜವಾದ ಹಿರೋಗಳು.ನಿಮಗೆ ನಮ್ಮ ಕೈಲಾದ ಸಹಾಯ ಮಾಡಬೇಕು ಅಂತಾ ತಿಂಗಳಿಂದ ಮನಸ್ಸಿನಲ್ಲಿ ಕೊರೆಯುತ್ತಿತ್ತು, ಇವತ್ತು ಕಾಲ ಕೂಡಿ ಬಂದಿದೆ ಹಾಗಾಗಿ ಈ ಕೆಲಸ ನೆರವೇರಿದೆ ಅಲ್ಲದೇ ಈಗಾಗಲೇ ಕೊರೋನಾದಿಂದಾಗಿ 16 ಆಶಾ ಕಾರ್ಯಕರ್ತರು ತಮ್ಮ ಪ್ರಾಣ ಕಳೆದುಕೊಂಡಿದ್ದಾರೆ.

ಸರ್ಕಾರ ಪ್ರತೀ ಕುಟುಂಬಕ್ಕೆ 50 ಲಕ್ಷ ಪರಿಹಾರ ಕೊಡ್ತೀವಿ ಅಂತಾ ಹೇಳಿದ್ರು. ಆದ್ರೆ, ಇಲ್ಲಿವರೆಗೆ ಒಂದೇ ಕುಟುಂಬಕ್ಕೆ ಹಣ ಸಿಕ್ಕಿದೆ ಎಂಬುದು ಗೊತ್ತಾಯ್ತು.

ಆಶಾ ಕಾರ್ಯಕರ್ತೆಯರಿಗೆ ಪ್ರೋತ್ಸಾಹ ಧನ ನೀಡ್ತೀವಿ ಅಂದಿದ್ರು ಅದ್ರಲ್ಲೂ ಸರ್ಕಾರ ವಿಫಲವಾಗಿದೆ. ತಮ್ಮ ಪ್ರಾಣ ಪಣಕ್ಕಿಟ್ಟು, ನಮ್ಮ ಪ್ರಾಣ ಉಳಿಸುವ ಕೆಲಸವನ್ನ ಕೊರೋನಾ ವಾರಿಯರ್ಸ್ ಮಾಡ್ತಿದಾರೆ. ಅವರನ್ನ, ಅವರ ಕುಟುಂಬವನ್ನ ಉಳಿಸುವ ಕೆಲಸವನ್ನ ನಾವು ಮಾಡ್ಬೇಕು..ನಮ್ಮ ಪಕ್ಷದ ಕಡೆಯಿಂದ ನಾವು ಕೈಲಾದಷ್ಟು ಆರ್ಥಿಕ ಸಹಾಯ ಮಾಡುತ್ತಿದ್ದೇವೆ... ನೆಬ್ಯೂಲೈಝರ್ ಕೊಟ್ಟಿದ್ದೇವೆ, ಮುಂದಿನ ದಿನಗಳಲ್ಲಿ ಮೆಡಿಕಲ್ ಕಿಟ್ ವಿತರಣೆ ಮಾಡುತ್ತೇವೆ... ಕುಮಾರಣ್ಣ, ಅನಿತಾ ಕುಮಾರಸ್ವಾಮಿ ನಿರಂತರವಾಗಿ ಅಧಿಕಾರಿಗಳ ಸಂಪರ್ಕದಲ್ಲಿದ್ದಾರೆ... ರಾಮನಗರ, ಚನ್ನಪಟ್ಟಣ ಎರಡು ಕಣ್ಣುಗಳಿದ್ದಂತೆ... ಚನ್ನಪಟ್ಟಣದಲ್ಲೂ ಕೂಡ ಆಶಾ ಕಾರ್ಯಕರ್ತೆಯರಿಗೆ ಆರ್ಥಿಕ ನೆರವು ನೀಡುತ್ತೇವೆ ಎಂದು ಹೇಳಿದರು.