ಕೊರೋನಾ ವಾರಿಯರ್ಸ್ ಗೆ ಆಹಾರ ಕಿಟ್ ವಿತರಣಾ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ನಿಖಿಲ್ ಕುಮಾರಸ್ವಾಮಿ.
ಕೊರೋನಾ ವಾರಿಯರ್ಸ್ ಗೆ ಆಹಾರ ಕಿಟ್ ವಿತರಣಾ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ನಿಖಿಲ್ ಕುಮಾರಸ್ವಾಮಿ.
ರಾಮನಗರ :ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷರಾದ ನಿಖಿಲ್ ಕುಮಾರಸ್ವಾಮಿ ರಾಮನಗರ ಜಿಲ್ಲೆ, ಮಾಗಡಿ ತಾಲ್ಲೂಕಿನ, ಕುದೂರು ಹೋಬಳಿ ಮತ್ತು ತಿಪ್ಪಸಂದ್ರ ಹೋಬಳಿಯಲ್ಲಿ ಕಿಟ್ ವಿತರಣೆಗೆ ಚಾಲನೆ ನೀಡಿದರು. ಕೊರೋನ ವಾರಿಯರ್ಸ್ ಗಳಾದ ಅಂಗನವಾಡಿ ಶಿಕ್ಷಕಿಯರು ಮತ್ತು ಸಹಾಯಕಿಯರು, ಆಶಾ ಕಾರ್ಯಕರ್ತೆಯರು, ಶುಶ್ರೂಷಕಿಯರು ಹಾಗೂ ಮಾಗಡಿ ತಾಲ್ಲೂಕಿನ ಎಲ್ಲಾ ಬಸ್ ಚಾಲಕರು, ನಿರ್ವಾಹಕರಿಗೆ ಆಹಾರ ಕಿಟ್ ವಿತರಣೆಮಾಡಲಾಯಿತು.
ಇದೇ ಸಂಧರ್ಭದಲ್ಲಿ ನಿಖಿಲ್ ಕುಮಾರಸ್ವಾಮಿಯವರಿಗೆ ಶಾಸಕರಾದ ಎ. ಮಂಜುನಾಥ್ ಹಾಗೂ ಸಮಾಜ ಸೇವಕರಾದ ಮಹದೇವ್ ಶಾಸ್ತ್ರಿ ಇವರು ಭಾಗಿಯಾಗಿದ್ದರು.
Recent comments