ಮಾಜಿ ಪ್ರಧಾನಿ ಶ್ರೀ ಹೆಚ್ ಡಿ ದೇವೇಗೌಡರಿಂದ ಬಡವರಿಗೆ ದಿನಸಿ ಕಿಟ್ ವಿತರಣೆ.
ಮಾಜಿ ಪ್ರಧಾನಿ ಶ್ರೀ ಹೆಚ್ ಡಿ ದೇವೇಗೌಡರಿಂದ ಬಡವರಿಗೆ ದಿನಸಿ ಕಿಟ್ ವಿತರಣೆ.
ಬೆಂಗಳೂರು: ಈ ಮಹಾಮಾರಿ ಕೊರೋನಾ ರೋಗದ ಲಾಕ್ ಡೌನ್ ನಿಂದ ಸಂಕಷ್ಟಕ್ಕೆ ಒಳಗಾಗಿರುವ ಬಡವರಿಗೆ ಮಾಜಿ ಪ್ರಧಾನ ಮಂತ್ರಿ ಹೆಚ್.ಡಿ. ದೇವೇಗೌಡರು ಮತ್ತು ವಿಧಾನ ಪರಿಷತ್ ಸದಸ್ಯರಾದ ಹೆಚ್. ಎಂ. ರಮೇಶ್ ಗೌಡ ಅವರು ಮಂಗಳವಾರ ದಿನಸಿ ಮತ್ತು ಸಾಮಗ್ರಿಗಳನ್ನು ವಿತರಣೆ ಮಾಡಿದರು . ಇನ್ನೂ ಈ ಇಳಿ ವಯಸ್ಸಿನಲ್ಲೂ ಬಡ ಜನರ ಕಷ್ಟಗಳಿಗೆ ಸ್ಪಂದನೆ ನೀಡಲು ಜನರಿಗಾಗಿ ಉಚಿತ ಫುಡ್ ಕಿಟ್ಗಳನ್ನು ನೀಡುತ್ತಿದ್ದಾರೆ.ಇಂದು ನಗರದ ಹೆಣ್ಣೂರಿನ ಎಚ್ ಎಮ್ ಆರ್ ವಿದ್ಯಾಸಂಸ್ಥೆಗಳ ಆವರಣದಲ್ಲಿ ರಮೇಶ್ ಗೌಡ ಅವರ ಪ್ರಾಯೋಜಕತ್ವದಲ್ಲಿ ಏರ್ಪಡಿಸಿದ್ದ ಬಡವರಿಗೆ ದಿನಸಿ ಕಿಟ್ ವಿತರಿಸುವ ಕಾರ್ಯಕ್ರಮಕ್ಕೆ ಮಾಜಿ ಪ್ರಧಾನಿ ದೇವೇಗೌಡ ಅವರು ಚಾಲನೆ ನೀಡಿದರು. ಸುಮಾರು ಸಾವಿರ ಮಂದಿಗೆ ದಿನಸಿ ಪದಾರ್ಥಗಳ ವಿತರಿಸಲಾಯಿತು.
Recent comments