ಮಾನ್ವಿ ವಿಧಾನ ಸಭಾ ಕ್ಷೇತ್ರದಿಂದ ಜೆಡಿಎಸ್ ಅಭ್ಯರ್ಥಿಯಾಗಿ ರಾಜಾ ವೆಂಕಟಪ್ಪ ನಾಯಕ ನಾಮಪತ್ರ ಸಲ್ಲಿಕೆ………
ಮಾನ್ವಿ ವಿಧಾನ ಸಭಾ ಕ್ಷೇತ್ರದಿಂದ ಜೆಡಿಎಸ್ ಅಭ್ಯರ್ಥಿಯಾಗಿ ರಾಜಾ ವೆಂಕಟಪ್ಪ ನಾಯಕ ನಾಮಪತ್ರ ಸಲ್ಲಿಕೆ………
![ರಾಜಾ ವೆಂಕಟಪ್ಪ ನಾಯಕ ನಾಮಪತ್ರ ಸಲ್ಲಿಕೆ………](/sites/default/files/inline-images/WhatsApp%20Image%202018-04-23%20at%2012.46.06%20PM_0.jpeg)
ಪ್ರತಿಷ್ಟೆಯ ಮಾನ್ವಿ ವಿಧಾನಸಭಾ ಕ್ಷೇತ್ರಕ್ಕೆ ಜೆಡಿಎಸ್ ಅಭ್ಯರ್ಥಿಯಾಗಿ ರಾಜಾವೆಂಕಟಪ್ಪ ನಾಯಕ ನಾಮಪತ್ರ ಸಲ್ಲಿಸಿದರು. ಕಳೆದೆರಡು ದಶಕಗಳಿಂದ ಕಾಂಗ್ರೆಸ್ ತನ್ನ ಭದ್ರ ಕೋಟೆಯೆಂದು ಬಿಂಬಿತವಾಗಿದ್ದು ,ಆದರೆ ಜೆಡಿಎಸ್ ಈ ಬಾರಿ ಮಾನ್ವಿ ಕ್ಷೇತ್ರವನ್ನು ತನ್ನ ತೆಕ್ಕೆಗೆ ಸೇರಿಸಿಕೊಳ್ಳಲು ಕಸರತ್ತು ನಡೆಸಿದೆ.ಈ ಹಿಂದಿನ ಚುನಾವಣೆಯಲ್ಲಿ ಕೆಲವೇ ಅಂತರದ ಮತಗಳಿಂದ ಸೋತ್ತಿದ್ದ ಜೆಡಿಎಸ್ ಅಭ್ಯರ್ಥಿ ರಾಜಾ ವೆಂಕಟಪ್ಪ ನಾಯಕ ಈ ಚುನಾವಣೆಯಲ್ಲಿ ಬಾರಿ ಸದ್ದು ಮಾಡುತ್ತಿದ್ದಾರೆ. ಇವರ ಗೆಲುವಿಗಾಗಿ ಕ್ಷೇತ್ರದ ಕಾರ್ಯಕರ್ತರು ನಾಯಕರುಗಳು ಜೊತೆ ವಿವಿಧ ಹಳ್ಳಿಗಳಲ್ಲಿ ಪ್ರಾಚಾರ ಹಮ್ಮಿಕೊಂಡಿದ್ದು ಜನರಿಂದ ಬೆಂಬಲದ ಭರವಸೆಯ ಮಾತು ಕೇಳಿಬರುತ್ತಿವೆ.ಅಲ್ಲದೆ ತಮ್ಮ ಪಕ್ಷದ ಕಾರ್ಯಕರ್ತ ಬೆಂಬಲಿಗರೊಂದಿಗೆ ನಾಮಪತ್ರ ಸಲ್ಲಿಕೆ ಮಾಡಿದರು.
Recent comments