Skip to main content
NEP -2020 ನ್ನು ಸದನದಲ್ಲಿ ಚರ್ಚಿಸುವಂತೆ ಮತ್ತು ರಾಜ್ಯದ ಸಮಗ್ರ ಶೈಕ್ಷಣಿಕ ಅಭಿವೃದ್ಧಿಗೆ ಒತ್ತಾಯಿಸಿ ಶಿಕ್ಷಣ ಸಂರಕ್ಷಿಸಿ ಭಾರತ ಉಳಿಸಿ ಸಮಿತಿ ವತಿಯಿಂದ ಮನವಿ.

NEP -2020 ನ್ನು ಸದನದಲ್ಲಿ ಚರ್ಚಿಸುವಂತೆ ಮತ್ತು ರಾಜ್ಯದ ಸಮಗ್ರ ಶೈಕ್ಷಣಿಕ ಅಭಿವೃದ್ಧಿಗೆ ಒತ್ತಾಯಿಸಿ ಶಿಕ್ಷಣ ಸಂರಕ್ಷಿಸಿ ಭಾರತ ಉಳಿಸಿ ಸಮಿತಿ ವತಿಯಿಂದ ಮನವಿ.

NEP -2020 ನ್ನು ಸದನದಲ್ಲಿ ಚರ್ಚಿಸುವಂತೆ ಮತ್ತು ರಾಜ್ಯದ ಸಮಗ್ರ ಶೈಕ್ಷಣಿಕ ಅಭಿವೃದ್ಧಿಗೆ ಒತ್ತಾಯಿಸಿ ಶಿಕ್ಷಣ ಸಂರಕ್ಷಿಸಿ ಭಾರತ ಉಳಿಸಿ ಸಮಿತಿ ವತಿಯಿಂದ ಮನವಿ.

Siddaramai

ಬೆಂಗಳೂರು : ಅಸಂವಿಧಾನಿಕವಾದ ಮತ್ತು ವಿದ್ಯಾರ್ಥಿ ವಿರೋಧಿ ಹೊಸ ರಾಷ್ಟ್ರೀಯ ಶಿಕ್ಷಣ ನೀತಿ -2020 ವಿಧಾನ ಸಭೆಯ ಅಧಿವೇಶನದಲ್ಲಿ ಚರ್ಚೆ ಮಾಡುವಂತೆ ಹಾಗೂ ರಾಜ್ಯದ ಸಮಗ್ರ ಶೈಕ್ಷಣಿಕ ಸಮಸ್ಯೆಗಳನ್ನು ಪರಿಹರಿಸಲು ಒತ್ತಾಯಿಸಿ ಸರ್ಕಾರದ ಮೇಲೆ ಒತ್ತಡ ತರುವಂತೆ ಆಗ್ರಹಿಸಿ 'ಶಿಕ್ಷಣ ಸಂರಕ್ಷಿಸಿ ಭಾರತ ಉಳಿಸಿ ಸಮಿತಿ' ಯ ಪದಾಧಿಕಾರಿಗಳು ಬೆಂಗಳೂರಿನಲ್ಲಿ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ, ಮಾಜಿ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಸೇರಿ, KPCC ಅಧ್ಯಕ್ಷ ಡಿ.ಕೆ. ಶಿವಕುಮಾರ ಸೇರಿ ಇತರ ವರಷ್ಠಿರಿಗೆ ಮನವಿ ಸಲ್ಲಿಸಿದರು. ಕೇಂದ್ರ ಸರ್ಕಾರ ಜಾರಿಗೆ ತರಲು ಹೊರಟಿರುವ ಹೊಸ ರಾಷ್ಟ್ರೀಯ ಶಿಕ್ಷಣ ನೀತಿ -2020 ರ ಪ್ರತಿ ಹಿಂದಿ ಮತ್ತು ಇಂಗ್ಲಿಷ್ ಭಾಷೆಯನ್ನು ಹೊರೆತು ಪಡಿಸಿ ದೇಶದ ಯಾವ ಪ್ರಾದೇಶಿಕ ಭಾಷೆಯಲ್ಲೂ ಇಂದಿಗೂ ಸಿಗುತ್ತಿಲ್ಲ, ಶಿಕ್ಷಣವು ಸಮವರ್ತಿ ಪಟ್ಟಿಯಲ್ಲಿದೆ. ಇದು ರಾಜ್ಯ ಮತ್ತು ಕೇಂದ್ರಕ್ಕೆ ಸಂಬಂಧಿಸಿದ ವಿಷಯ ಆದರೆ ಯಾವ ರಾಜ್ಯ ಸರ್ಕಾರದ ಸಹಮತ ಪಡೆಯದೆ ಶಾಸನ ಸಭೆಯಲ್ಲಿ ಚರ್ಚೆ ಮಾಡಿ ಅಭಿಪ್ರಾಯ ಕ್ರೂಡಿಕರಣ ಮಾಡದೆ ಜಾರಿ ಮಾಡಲು ಹೊರಟಿರುವುದು ಅಪ್ರಜಾಸತ್ತಾತ್ಮಕ ನಡೆಯಾಗಿದೆ. ಈ ನೀತಿಯಲ್ಲಿ ವಿದ್ಯಾರ್ಥಿ ಮತ್ತು ಶೈಕ್ಷಣಿಕ ಅಭಿವೃದ್ಧಿಯ ವಿರೋಧದ ಅಂಶಗಳೆ ಹೆಚ್ಚವೆ ಶಿಕ್ಷಣವನ್ನು ನೇರವಾಗಿ ಮಾರಾಟಕ್ಕೆ ಅವಕಾಶ ಮಾಡಿಕೊಡಲಾಗಿದೆ.

ಮತ್ತು ಶಿಕ್ಷಣ ಕ್ಷೇತ್ರ ಸಂವಿಧಾನದ ಶೆಡ್ಯೂಲ್ -07 ರಂತೆ ಸಮವರ್ತಿ ಪಟ್ಟಿಯಲ್ಲಿ ಬರುತ್ತದೆ. ಆದರೆ ಈ ಹೊಸ ರಾಷ್ಟ್ರೀಯ ಶಿಕ್ಷಣ ನೀತಿಯ ರಾಜ್ಯ ಸರ್ಕಾರಗಳಿಗೆ ಇರುವ ಶಿಕ್ಷಣ ಕ್ಷೇತ್ರ ಅಧಿಕಾರ, ಹಕ್ಕುಗಳನ್ನು ಮೊಟಕುಗೊಳಿಸಿ ಶಿಕ್ಷಣವನ್ನು ನೀತಿ ನಿರೂಪಣೆಯ ಅಧಿಕಾರಿಗಳನ್ನು ಕೇಂದ್ರೀಕರಣಗೊಳಿಸುವ ಅಂಶಗಳನ್ನು ನಮ್ಮ ರಾಜ್ಯ ಸರ್ಕಾರ ವಿರೋಧಿಸಬೇಕು. ಮತ್ತು ಶಿಕ್ಷಣ ಕ್ಷೇತ್ರದಲ್ಲಿ ರಾಜ್ಯದ ಸರ್ಕಾರಕ್ಕಿರುವ ಅಧಿಕಾರ, ಹಕ್ಕುಗಳನ್ನು ಕಾಯ್ದಿರಿಸಲು ಕೇಂದ್ರ ಸರ್ಕಾರವನ್ನು ಆಗ್ರಹಿಸಿ ಒಕ್ಕೂಟ ವ್ಯವಸ್ಥೆಯ ಆಶಯಗಳ ಉಳಿಸಲು ಮುಂದಾಗಬೇಕು. ಜೊತೆಗೆ ಸರ್ಕಾರವೇ ಹೊಸ ರಾಷ್ಟ್ರೀಯ ಶಿಕ್ಷಣ ನೀತಿ 2020 ಸಂವಿಧಾನದ ಮಾನ್ಯತೆ ಪಡೆದ ಎಲ್ಲ ಭಾಷೆಗಳಿಗೆ ಅನುವಾದಿಸಿ ಅಧ್ಯಯನಕ್ಕೆ ಅವಕಾಶ ನೀಡಿ. ಶಿಕ್ಷಣ ತಜ್ಞರು, ವಿದ್ಯಾರ್ಥಿ ಸಂಘಟನೆಗಳು, ಅಂಗನವಾಡಿ, ಬಿಸಿಯೂಟ, ಹಾಗೂ ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದ ಎಲ್ಲರೂ ಚರ್ಚಿಸಿ ತಿದ್ದುಪಡಿ ಸಲಹೆಗಳನ್ನು ನೀಡಲು ಅಗತ್ಯವಾದ ಕಾಲಾವಕಾಶ ಬೇಕೇಬೇಕು. ಮತ್ತು ಕೇಂದ್ರ ಸರ್ಕಾರದ ಸಚಿವ ಸಂಪುಟ ಅನುಮೋದಿತ ಹೊಸ ರಾಷ್ಟೀಯ ಶಿಕ್ಷಣ ನೀತಿಯ ಕುರಿತು ರಾಜ್ಯ ವಿಧಾನಸಭೆ, ವಿಧಾನ ಪರಿಷತ್ತಿನ ಉಭಯ ಸದನಗಳಲ್ಲಿ ಸಮಗ್ರ ಚರ್ಚೆ ನಡೆಸಬೇಕು. ಈ ಸದನದಲ್ಲಿ ಈ ಕುರಿತು ಜನಪ್ರತಿನಿಧಿಗಳು ಮಾತನಾಡಬೇಕು.

congress

ಮತ್ತು ಹೊಸ ರಾಷ್ಟ್ರೀಯ ಶಿಕ್ಷಣ ನೀತಿ 2020 ಪ್ರಸ್ತಾಪಿಸಿರುವ ತ್ರಿಭಾಷಾ ಸೂತ್ರವನ್ನು ತಮಿಳುನಾಡು ರಾಜ್ಯ ಸರ್ಕಾರದ ಮಾದರಿಯಲ್ಲಿ ರಾಜ್ಯ ಸರ್ಕಾರ ವಿರೋಧಿಸಬೇಕು ಹಾಗೂ ಕೊವೀಡ್ -19 ಕಾಲಾವಧಿಯಲ್ಲಿ ದೇಶದ ಭವಿಷ್ಯವನ್ನು ರೂಪಿಸುವ ಹೊಸ ರಾಷ್ಟ್ರೀಯ ಶಿಕ್ಷಣ ನೀತಿ 2020 ಜಾರಿಯ ಕುರಿತು ರಾಜ್ಯ ಸರ್ಕಾರದ ಮಂತ್ರಿಗಳು ನಡೆಸುತ್ತಿರುವ ಏಕಮುಖವಾದ, ಅಪ್ರಜಾಸತ್ತಾತ್ಮಕವಾಗಿ ಅನುಷ್ಠಾನದ ತಯಾರಿಗಳನ್ನು ಕೈ ಬಿಡಬೇಕೆಂದು ಬೇಡಿಕೆಗಳನ್ನು ಕುರಿತಂತೆ ವಿಧಾನ ಸಭೆಯ ಅಧಿವೇಶನದಲ್ಲಿ ಚರ್ಚೆ ಮಾಡಿ ಸರ್ಕಾರದ ಮೇಲೆ ಒತ್ತಡ ತರಬೇಕೆಂದು ಒತ್ತಾಯಿಸಿ ವಿರೊಧ ಪಕ್ಷದ ನಾಯಕರಾದ ಸಿದ್ದರಾಮಯ್ಯ, ಮಾಜಿ ಮುಖ್ಯಮಂತ್ರಿ ಕುಮಾರ್ ಸ್ವಾಮಿ ಹಾಗೂ KPCC ಅಧ್ಯಕ್ಷರಾದ ಡಿ.ಕೆ ಶಿವಕುಮಾರ ರವರಿಗೆ ಶಿಕ್ಷಣ ಸಂರಕ್ಷಿಸಿ ಭಾರತ ಉಳಿಸಿ ಸಮಿತಿ ವತಿಯಿಂದ ಸಲ್ಲಿಸಿದ ಮನವಿಯ ಮೂಲಕ ಒತ್ತಾಯಿಸಿದರು. ಈ ಸಂದರ್ಭದಲ್ಲಿ SFI ರಾಜ್ಯಾಧ್ಯಕ್ಷರಾದ ಅಮರೇಶ ಕಡಗದ, AISF ರಾಜ್ಯಾಧ್ಯಕ್ಷರಾದ ಜ್ಯೋತಿ. ಕೆ. SFI ಕಾರ್ಯದರ್ಶಿ ವಾಸುದೇವ ರೆಡ್ಡಿ ಕೆ. VJDS ರಾಜ್ಯಾಧ್ಯಕ್ಷರಾದ ಉಮೇಶ್ ಗೌಡ, NSUI ರಾಜ್ಯ ಪ್ರಧಾನ ಕಾರ್ಯದರ್ಶಿ ಮನೀಷ್ ರಾಜ್, VBVನ ರಾಜ್ಯ ಸಂಚಾಲಕರಾದ ತೋಳಿ ಭರಮಣ್ಣ SFIನ ರಾಜ್ಯ ಉಪಾಧ್ಯಕ್ಷರಾದ ಶಿವಕುಮಾರ ಮ್ಯಾಗಳಮನಿ, ರಾಜ್ಯ ಜಂಟಿ ಕಾರ್ಯದರ್ಶಿ ಭೀಮನಗೌಡ ಸುಂಕೇಶ್ವರಾಳ ಇದ್ದರು.

Add new comment

Plain text

  • No HTML tags allowed.
  • Lines and paragraphs break automatically.
  • Web page addresses and email addresses turn into links automatically.