ಸಾಧಕರಿಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ನೀಡಲು ಒತ್ತಾಯ; ರೇಖಾ ಬಡಿಗೇರ್.
ಸಾಧಕರಿಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ನೀಡಲು ಒತ್ತಾಯ; ರೇಖಾ ಬಡಿಗೇರ್.
ರಾಯಚೂರು ಸೆ. 24. ಕಳೆದ ನಾಲ್ಕೈದು ವರ್ಷಗಳಿಂದ ರಾಯಚೂರು ಜಿಲ್ಲೆಯಲ್ಲಿ ಜಿಲ್ಲಾಡಳಿತ ಮತ್ತು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ನಾಡಿನ ವಿವಿಧ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದ ಸಾಧಕರನ್ನು ಗುರುತಿಸಿ ಜಿಲ್ಲಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿಯನ್ನು ನೀಡುತ್ತಿರುವುದನ್ನು ನಿಲ್ಲಿಸಿದ್ದಾರೆ .ಇದರಿಂದಾಗಿ ಈಗಾಗಲೇ ಇಡೀ ರಾಜ್ಯದಲ್ಲಿ ಕನ್ನಡ ರಾಜ್ಯೋತ್ಸವ ದಿನದಂದು ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಸಾಧಕರಿಗೆ ರಾಜ್ಯೋತ್ಸವ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗುವುದು. ಆದರೆ ರಾಯಚೂರು ಜಿಲ್ಲೆಯಲ್ಲಿ ಮಾತ್ರ ಕನ್ನಡ ರಾಜ್ಯೋತ್ಸವ ದಿನ ಯಾರಿಗೂ ರಾಜ್ಯೋತ್ಸವ ಪ್ರಶಸ್ತಿಯನ್ನು ನೀಡದಿರುವುದು ನಿಜಕ್ಕೂ ಕನ್ನಡಿಗರ ದೌರ್ಭಾಗ್ಯವೇ ಆಗಿದೆ ಎಂದು ಕಲಾ ಸಂಕುಲ ಸಂಸ್ಥೆಯ ಅಧ್ಯಕ್ಷರಾದ ರೇಖಾ ಬಡಿಗೇರ್ ಅವರು ಪತ್ರಿಕೆಗೆ ತಿಳಿಸಿದ್ದಾರೆ. ಜಿಲ್ಲೆಯಲ್ಲಿ ವಿವಿಧ ಕ್ಷೇತ್ರದಲ್ಲಿ ಸಾಹಿತ್ಯ. ಸಂಘಟನೆ .ಸಂಗೀತ.
ಕಲಾವಿದರು ಸಮಾಜ ಸೇವೆ .ವೈದ್ಯಕೀಯ ಕ್ಷೇತ್ರ. ಪತ್ರಿಕೋದ್ಯಮ ಕ್ಷೇತ್ರ. ಸಂಘಟನೆ .ಪರಿಸರ. ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ ಸಾಧಕರಿಗೆ ಪ್ರತಿ ಸಲ ರಾಜ್ಯ ನೀಡಿ ಗೌರವಿಸುತ್ತಿದ್ದರು. ಆದರೆ ಕಳೆದ ಐದು ವರ್ಷಗಳಿಂದ ರಾಯಚೂರು ಜಿಲ್ಲೆಯಲ್ಲಿ ಜಿಲ್ಲಾಡಳಿತ ಮತ್ತು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗು ಸ್ಥಳೀಯ ಜನಪ್ರತಿನಿಧಿಗಳ ನಿರ್ಲಕ್ಷದಿಂದ ಪ್ರಶಸ್ತಿ ನೀಡುವುದನ್ನು ನಿಲ್ಲಿಸಿರುವುದು ಖಂಡನೀಯ .ಜಿಲ್ಲಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆಯಾದವರು ರಾಜ್ಯಮಟ್ಟದ ರಾಜ್ಯೋತ್ಸವ ಪ್ರಶಸ್ತಿಗೆ ಅರ್ಹರಾಗುತ್ತಾರೆ. ರಾಯಚೂರು ನಗರದಲ್ಲಿರುವ ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆ ಸಮಿತಿಯನ್ನು ಮಾಡಿ ಸಾಧಕರಿಗೆ ಪ್ರಶಸ್ತಿ ನೀಡಿ ಗೌರವಿಸಬೇಕೆಂದು ರೇಖಾ ಬಡಿಗೇರ್ ಅವರು ಸರ್ಕಾರಕ್ಕೆ ಆಗ್ರಹಿಸಿದ್ದಾರೆ. ಈಗಾಗಲೇ ಸಾಕಷ್ಟು ಜನ ಸಾಧಕರು ವಂಚಿತರಾಗಿದ್ದಾರೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಜಿಲ್ಲೆಯಲ್ಲಿ 50 ಜನ ಸಾಧಕರಿಗೆ ಈ ವರ್ಷ ಪ್ರಶಸ್ತಿ ನೀಡಿ ಗೌರವಿಸಬೇಕು
Recent comments