Skip to main content
'ಶಂಭೋ ಶಿವ ಶಂಕರ' ಚಿತ್ರಕ್ಕೆ  ಬಿರುಸಿನ ಚಿತ್ರೀಕರಣ.

'ಶಂಭೋ ಶಿವ ಶಂಕರ' ಚಿತ್ರಕ್ಕೆ ಬಿರುಸಿನ ಚಿತ್ರೀಕರಣ.

'ಶಂಭೋ ಶಿವ ಶಂಕರ' ಚಿತ್ರಕ್ಕೆ ಬಿರುಸಿನ ಚಿತ್ರೀಕರಣ.

Kannada new film

ಅದ್ದೂರಿಯಾಗಿ ಚಿತ್ರೀಕರಣಗೊಂಡ ನಾಯಕಿ ಸೋನಾಲ್ ಮಾಂಟೆರೊ ಪ್ರವೇಶ ದೃಶ್ಯ. ಅಘನ್ಯ ಪಿಕ್ಚರ್ಸ್ ಲಾಂಛನದಲ್ಲಿ ವರ್ತೂರ್ ಮಂಜು ಅವರು ನಿರ್ಮಿಸುತ್ತಿರುವ 'ಶಂಭೋ ಶಿವ ಶಂಕರ' ಚಿತ್ರದ ಚಿತ್ರೀಕರಣ ಬಿರುಸಿನಿಂದ ಸಾಗಿದೆ. ನಾಯಕಿ ಸೋನಾಲ್ ಮಾಂಟೆರೊ ಅವರ ಪ್ರವೇಶ ದೃಶ್ಯವನ್ನು(ಇಂಟ್ರಡಕ್ಷನ್ ಸೀನ್) ಇತ್ತೀಚೆಗೆ ಉತ್ತರಹಳ್ಳಿಯ ಸುಬ್ರಮಣ್ಯ ಪುರ ಪೊಲೀಸ್ ಠಾಣೆ ಬಳಿ ಅದ್ದೂರಿಯಾಗಿ ಚಿತ್ರೀಕರಿಸಿಕೊಳ್ಳಲಾಯಿತು.

ಸೊನಾಲ್ ಮಾಂಟೆರೊ, ನಾಯಕರಾದ ಅಭಯ್ ಪುನೀತ್, ರೋಹಿತ್ ಹಾಗೂ ರಕ್ಷಕ್ ಮುಂತಾದವರು ಈ ಭಾಗದ ಚಿತ್ರೀಕರಣ ದಲ್ಲಿ ಭಾಗವಹಿಸಿದ್ದರು. ಸುಪ್ರೀಂ ಹೀರೋ ಶಶಿಕುಮಾರ್ ಸಹ ಈ ಚಿತ್ರದಲ್ಲಿ ಪೊಲೀಸ್ ಅಧಿಕಾರಿಯಾಗಿ ಕಾಣಿಸಿಕೊಳ್ಳುತ್ತಿದ್ದಾರೆ. ಈಗಾಗಲೇ ಅರ್ಧಕ್ಕೂ ಹೆಚ್ಚು ಭಾಗದ ಚಿತ್ರೀಕರಣ ಮುಕ್ತಯಾವಾಗಿದೆ.

Kannada new film

ಹೆಚ್ಚಿನ ಭಾಗದ ಚಿತ್ರೀಕರಣ ಬೆಂಗಳೂರಿನಲ್ಲೇ ನಡೆದಿದೆ. ಶಂಕರ್ ಕೋನಮಾನಹಳ್ಳಿ ಈ ಚಿತ್ರವನ್ನು ನಿರ್ದೇಶಿಸುತ್ತಿದ್ದಾರೆ. ಕಿರುತೆರೆಯಲ್ಲಿ ಜನಪ್ರಿಯ ಧಾರಾವಾಹಿಗಳನ್ನು ನಿರ್ದೇಶಿಸಿರುವ ಶಂಕರ್ ಕೋನಮಾನಹಳ್ಳಿ ಅವರಿಗೆ ಬೆಳ್ಳಿತೆರೆಯಲ್ಲಿ ಇದು ಮೊದಲ ಚಿತ್ರ. ಕಥೆ, ಚಿತ್ರಕಥೆ, ಸಂಭಾಷಣೆಯನ್ನು ನಿರ್ದೇಶಕರೆ ಬರೆದಿದ್ದಾರೆ. ಗೌಸ್ ಫೀರ್ ಹಾಗೂ ಹಿತನ್ ಹಾಸನ್ ಹಾಡುಗಳನ್ನು ಬರೆದಿದ್ದು, ಹಿತನ್ ಹಾಸನ್ ಅವರೆ ಸಂಗೀತ ನೀಡುತ್ತಿದ್ದಾರೆ‌. ನಟರಾಜ್ ಮುದ್ದಾಲ ಛಾಯಾಗ್ರಹಣ, ಕಲೈ ನೃತ್ಯ ನಿರ್ದೇಶನ, ವೆಂಕಟೇಶ್ ಯುಡಿವಿ ಸಂಕಲನ ಹಾಗೂ ಅಲ್ಟಿಮೆಟ್ ಶಿವು ಅವರ ಸಾಹಸ ನಿರ್ದೇಶನ ಈ ಚಿತ್ರಕ್ಕಿದೆ.

Kannada new film

'ಶಂಭೋ ಶಿವ ಶಂಕರ' ಮೂರು ನಾಯಕ ಪಾತ್ರಗಳ ಹೆಸರಾಗಿದ್ದು, ಅಭಯ್ ಪುನೀತ್, ರೋಹಿತ್ ಹಾಗೂ ರಕ್ಷಕ್ ಈ ಮೂರು ಪಾತ್ರಗಳಲ್ಲಿ ಕಾಣಿಸಿಕೊಳುತ್ತಿದ್ದಾರೆ.

Add new comment

Plain text

  • No HTML tags allowed.
  • Lines and paragraphs break automatically.
  • Web page addresses and email addresses turn into links automatically.